
ದಿನಾಂಕ:28-01-2025(ಹಾಯ್ ಉಡುಪಿ ನ್ಯೂಸ್)
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಸಂಘಟನೆಯ ವತಿಯಿಂದ ದಿನಾಂಕ:26- 01-2025 ರಂದು ಉಡುಪಿ ಜಿಲ್ಲೆಯ
ಬ್ರಹ್ಮಾವರ ತಾಲೂಕಿನ ಬಾರ್ಕೂರು ರುಕ್ಮಿಣಿ ಕಾಲೇಜ್ ನಲ್ಲಿ ಬ್ರಹ್ಮಾವರ ತಾಲೂಕು ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರುಗಳ ಸಭೆ ನಡೆಯಿತು.
ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ಸಮ್ಮುಖದಲ್ಲಿ ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾಗಿ ಸ್ಪ್ಯಾನಿ ಡಿಸೋಜ ಅವರು ನೇಮಕಗೊಂಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಘಟಕದ ಉದ್ಘಾಟನೆ ಹಾಗೂ ನೂತನ ತಾಲೂಕು ಪದಾಧಿಕಾರಿಗಳು ಮತ್ತು ಸದಸ್ಯರ ಸೇರ್ಪಡೆಯನ್ನು ಸಭೆಯಲ್ಲಿ ನೆರವೇರಿಸಿದರು .
ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಉಪಾಧ್ಯಕ್ಷರಾಗಿ ಆಯ್ಕೆಯಾದ ಮಾಧವ ಕೆ ಬಂಗೇರ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿರವರು ಸಂಘಟನೆಯ ಶಾಲು ಹೊದಿಸಿ ಹೂ ಗುಚ್ಛ ನೀಡಿ ಅಭಿನಂದಿಸಿದರು.
ಈ ಕಾರ್ಯಕ್ರಮದಲ್ಲಿ ಕ.ರ.ವೇ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ , ಮಹಿಳಾ ಜಿಲ್ಲಾಧ್ಯಕ್ಷರಾದ ಗೀತ ಪಾಂಗಾಳ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೋಪಾಲ್ ದೊರೆ, ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ದೇವಕಿ ಬಾರ್ಕೂರು, ಜಿಲ್ಲಾ ಜಾಲತಾಣ ಸಂಚಾಲಕಿ ರಶ್ಮಿ,ಕಾರ್ಮಿಕ ಘಟಕದ ಉಪಾಧ್ಯಕ್ಷರಾದ ದೇವೇಂದ್ರ ಪೂಜಾರಿ, ಬ್ರಹ್ಮಾವರ ತಾಲೂಕು ಸದಸ್ಯರಾದ ಮಾಧವ ಕೆ ಕುಂದರ್ , ಶ್ರೀನಿವಾಸ್ ಪೂಜಾರಿ, ಶಾಂತ ಪೂಜಾರಿ, ರತ್ನಾಕರ್ ಪೂಜಾರಿ, ಶೇಖರ್ ಕಾಂಚನ್ , ಉಮೇಶ್, ಗಣೇಶ್, ರವಿರಾಜ್, ಅಶೋಕ, ಪೆಟ್ರಿಕ್ ಗೊನ್ಸಾ ಲಿಸ್, ಶಶಿಧರ , ಪ್ರದೀಪ , ನಿರ್ಮಲ ಪೂಜಾರಿ, ಜ್ಯೋತಿ, ಶಾಲಿನಿ ಉಪಸ್ಥಿತರಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
