Spread the love
  • ಮಣಿಪಾಲ: ದಿನಾಂಕ :11-02-2025(ಹಾಯ್ ಉಡುಪಿ ನ್ಯೂಸ್) ಶಿವಳ್ಳಿ ಗ್ರಾಮದ ಡಿ.ಸಿ.ಆಫೀಸ್ ರೋಡ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಇಬ್ಬರು ಯುವಕರನ್ನು ಮಣಿಪಾಲ ಪೊಲೀಸ್‌ ಠಾಣೆಯ ಉಪನಿರೀಕ್ಷಕರಾದ ಅನೀಲ ಕುಮಾರ್ ಅವರು ಬಂಧಿಸಿದ್ದಾರೆ.
  • ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಅನೀಲಕುಮಾರ ರವರು ದಿನಾಂಕ:09-02-2025 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಡಿ.ಸಿ ಆಫೀಸ್‌ ರೋಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ದಿವ್ಯಾಶ್‌ (22) ಎಂಬಾತನು ಮತ್ತು ನಿಖಿಲ್ (30) ಎಂಬವನು ಅಮಲಿನಲ್ಲಿದ್ದು, ಇವರೀರ್ವರು ಗಾಂಜಾ ಸೇವನೆ ಮಾಡಿದ ಸಂಶಯದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದಾರೆ.
  • ದಿನಾಂಕ: 10/02/2025 ರಂದು ಆರೋಪಿಗಳು ಈರ್ವರು ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಬಗ್ಗೆ ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಗಳು ದೃಢಪತ್ರ ನೀಡಿದ್ದಾರೆ ಎನ್ನಲಾಗಿದೆ.
  • ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಕಲಂ: 27 (b) NDPS ACT ರಂತೆ ಪ್ರಕರಣ ದಾಖಲಾಗಿದೆ.
error: No Copying!