
ದಿನಾಂಕ:01-03-2025(ಹಾಯ್ ಉಡುಪಿ ನ್ಯೂಸ್)
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಅಜ್ಜರಕಾಡು 33 ನೇ ವಾರ್ಡಿನ ವಿದ್ಯಾರಣ್ಯ ರಸ್ತೆಯ ಅಲಂಕಾರ್ ಚಿತ್ರ ಮಂದಿರ ದಿಂದ ಸಿಟಿ ಆಸ್ಪತ್ರೆ ತನಕ ಒಳಚರಂಡಿ ಜಾಲದ ಪೈಪ್ಲೈನ್ ಬದಲಾವಣೆ ಮಾಡಿ ಛೇಂಬರ್ ಪುನರ್ ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ ಮಾರ್ಚ್ 3 ರಿಂದ ಮಾರ್ಚ್ 22 ರ ವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.