
- ಕಾರ್ಕಳ: ದಿನಾಂಕ:07-03-2025(ಹಾಯ್ ಉಡುಪಿ ನ್ಯೂಸ್) ನಂದಳಿಕೆ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪೊಲೀಸರಿಗೆ ದೂರು ನೀಡಿದ್ದಾರೆ.
- ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಕರುಣಾಕರ (60) ಅವರು ದಿನಾಂಕ 06/03/2025 ರಂದು ಎಂದಿನಂತೆ ಸಂಜೆ ಶಾಲಾ ಕೊಠಡಿಗಳಿಗೆ ಬೀಗ ಹಾಕಿ ಹೋಗಿದ್ದು, ದಿನಾಂಕ 07/03/2025 ರಂದು ಬೆಳಗ್ಗೆ ಶಾಲೆಗೆ ಬಂದು ನೋಡಿದಾಗ ಮುಖ್ಯ ಶಿಕ್ಷಕರ ಕೊಠಡಿಯ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಯಾವುದೋ ಸಾಧನದಿಂದ ಮುರಿದು ಕಛೇರಿಯ ಒಳಗೆ ಪ್ರವೇಶಿಸಿ ಕಛೇರಿಯ ಒಳಗಿನ ಕಪಾಟಿನ ಬಾಗಿಲನ್ನು ತೆರದಿದ್ದಲ್ಲದೇ ರಿಜಿಸ್ಟರ್ ಪುಸ್ತಕಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡು ಬಂದಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
- ಯಾವುದೇ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದಿಲ್ಲ ಎನ್ನಲಾಗಿದೆ . ಯಾರೋ ಕಳ್ಳರು ಶಾಲಾ ಮುಖ್ಯ ಶಿಕ್ಷಕರ ಕೊಠಡಿಗೆ ಹಾಕಿದ ಬೀಗವನ್ನು ಮುರಿದು ಒಳಪ್ರವೇಶಿಸಿ ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ ಎಂದು ಮುಖ್ಯೋಪಾಧ್ಯಾಯರು ಪೊಲೀಸರಿಗೆ ದೂರು ನೀಡಿದ್ದಾರೆ.
- ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 331(3), 331(4), 62 BNS ನಂತೆ ಪ್ರಕರಣ ದಾಖಲಾಗಿದೆ.