
ಕುಂದಾಪುರ : ದಿನಾಂಕ 16-03-2025(ಹಾಯ್ ಉಡುಪಿ ನ್ಯೂಸ್) ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯ ರಾಯಲ್ ಸಭಾ ಭವನದ ಸಮೀಪದಲ್ಲಿರುವ ಶ್ರೀ ನಾಗಬೊಬ್ಬರ್ಯ, ಹ್ಯಾಗುಳಿ ಹಾಗೂ ಪರಿವಾರ ದೇವಸ್ಥಾನದ 10 ನೇ ವರ್ಷದ ವರ್ಧಂತ್ಯೋತ್ಸವವು ಎ.5 ರಂದು ನಡೆಯಲಿರುವ ಪ್ರಯುಕ್ತ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.16 ರಂದು ನಡೆಯಿತು.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ|ನಾಗೇಶ್ ಅವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಶ್ರೀ ನಾಗ ಬೊಬ್ಯರ್ಯ ದೇವಸ್ಥಾನದ ಅಧ್ಯಕ್ಷರಾದ ರಾಧಾಕೃಷ್ಣ ಯು. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ರಾಣುಮಕ್ಕಿ ನಾಗಬನದ ಅಧ್ಯಕ್ಷರು ಹಾಗೂ ಕುಂದೇಶ್ವರ ದೇವಸ್ಥಾನದ ಮಾಜಿ ಮೊಕ್ತೇಸರರಾದ ಕೆ. ಆರ್. ಉಮೇಶ್, ರಾಯಲ್ ಕ್ಲಬ್ ಅಧ್ಯಕ್ಷರಾದ ಕೆ.ನಿತ್ಯಾನಂದ, ಮೈಲಾರೇಶ್ವರ ಯುವಕ ಮಂಡಲದ ಅಧ್ಯಕ್ಷರಾದ ಕೆ.ಸಿ ಶರತ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ಸತೀಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ವಿ. ಮೊಗವೀರ, ಕೋಶಾಧಿಕಾರಿ ರಮೇಶ್ ಪೂಜಾರಿ ಮೇಲ್ಹಿತ್ಲು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಹಕಾರಿ ಸಂಘದ ಸಂಯೋಜಕರಾದ ಶಾಂತ ಹಾಗೂ ಶ್ರೀ ರಾಮ ಕ್ರೆಡಿಟ್ ಸೊಸೈಟಿಯ ನಿರ್ದೇಶಕರಾದ ಶಾರದ ವಿಜಯ ಕುಮಾರ್ ಹಾಗೂ ಆಡಳಿತ ಮಂಡಳಿಯ ಸರ್ವಸದಸ್ಯರು ಹಾಗೂ ದಶಮಾನೋತ್ಸವದ ಮಹಿಳಾ ಮಂಡಳಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.