Spread the love

ಉಡುಪಿ: ದಿನಾಂಕ : 14-04-2025(ಹಾಯ್ ಉಡುಪಿ ನ್ಯೂಸ್) ಮಣಿಪಾಲ ಪರಿಸರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರು ಬಂಧಿಸಿದ್ದಾರೆ

ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರಿಗೆ ದಿನಾಂಕ:13-04-2025 ರಂದು  ಉಡುಪಿ ತಾಲೂಕು 80 ಬಡಗಬೆಟ್ಟು ಗ್ರಾಮದ ಮಣಿಪಾಲ ತಾಂಗೋಡೆ 2ನೇ ಕ್ರಾಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಆರೀಬ್‌ ಅಹಮ್ಮದ್‌ ಎಂಬಾತನು ಆಂದ್ರ ಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ಬರುತ್ತಿದ್ದು ಆತನಿಂದ ಗಾಂಜಾ ಪಡೆಯಲು ಅಪರಿಚಿತರು ಬರುತ್ತಾರೆ ಎಂಬ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಸಿಬ್ಬಂದಿಯವರ ಸಹಕಾರದೊಂದಿಗೆ ಮೇಲಿನ ಸ್ಥಳಕ್ಕೆ ದಾಳಿ ನಡೆಸಿ, ಆರೀಬ್‌ ಅಹಮ್ಮದ್‌ ಎಂಬವವನನ್ನು  ಬಂಧಿಸಿದ್ದಾರೆ.

ಆಪಾದಿತ ಆರೀಬ್ ಅಹಮ್ಮದ್ ಬಳಿ ಇದ್ದ ಯಾವುದೇ ಪರವಾನಿಗೆ ಇಲ್ಲದೇ, ಕಾನೂನು ಬಾಹಿರವಾಗಿ ಮಾರಾಟ ಮಾಡಲು ಹೊಂದಿದ್ದ 07 ಕಿಲೋ, 304 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದಿದ್ದು ಗಾಂಜಾದ ಅಂದಾಜು ಮೌಲ್ಯ ರೂ. 5,75,000/- ಆಗಿರುತ್ತದೆ. ಆಪಾದಿತರು ಬಳಸಿದ್ದ ಮೊಬೈಲ್ ಪೋನ್-2, ಅಂದಾಜು ಮೌಲ್ಯ ರೂ. 20,000/-, ಗಾಂಜಾವನ್ನು ಸಾಗಾಟ ಮಾಡಲು ಬಳಸಿದ್ದ ಬೆನ್ನಿಗೆ ಹಾಕಿಕೊಳ್ಳುವ ಬ್ಯಾಗ್-1 , ಕೈಯಲ್ಲಿ ಹಿಡಿದುಕೊಂಡಿದ್ದ Vimal Pan Masala ಎಂದು ಮುದ್ರಣ ಇರುವ ಕಪ್ಪು ಬಣ್ಣದ ಚೀಲ -1, ಹಾಗೂ ನಗದು ರೂಪಾಯಿ 1520/- ಇವುಗಳನ್ನು ಮುಂದಿನ ಕ್ರಮದ ಬಗ್ಗೆ ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡಿರುವ ಸ್ವತ್ತುಗಳ ಒಟ್ಟು ಅಂದಾಜು ಮೌಲ್ಯ ರೂ. 5,96,520/- ಆಗಿದ್ದು ಆರೋಪಿತನು ವಿಜಯವಾಡದ ಸೈಕಲ್‌ ರಿಕ್ಷಾವಾಲ ನಿಂದ ಗಾಂಜಾ ಖರೀದಿಸಿರುವ ಬಗ್ಗೆ ವಿಚಾರಣೆ ವೇಳೆ ಪೊಲೀಸರಿಗೆ ಹೇಳಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ  ಕಲಂ 8(c), 20 (b) (ii), (B) NDPS Act 1985 ರಂತೆ ಪ್ರಕರಣ ದಾಖಲಾಗಿದೆ.

error: No Copying!