
ಉಡುಪಿ: ದಿನಾಂಕ 24.04.2025 (ಹಾಯ್ ಉಡುಪಿ ನ್ಯೂಸ್) ಅಜ್ಜರಕಾಡು ಭುಜಂಗ ಪಾರ್ಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜುಗಾರಿ ನಡೆಸುತ್ತಿದ್ದ ಕುಂದಾಪುರದ ಮೂವರನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರು ಬಂಧಿಸಿದ್ದಾರೆ.
ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರಿಗೆ ದಿನಾಂಕ: 24-04-2025 ರಂದು ಉಡುಪಿ ತಾಲೂಕು ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಕೆಲ ಮಂದಿ ಯುವಕರು ಜೊತೆಯಾಗಿ ಸೇರಿಕೊಂಡು PARKER ಎಂಬ ಬೆಟ್ಟಿಂಗ್ ಮೊಬೈಲ್ ಆ್ಯಪ್ನ ಸಹಾಯದಿಂದ ತಮ್ಮಲ್ಲಿರುವ ಸ್ಮಾರ್ಟ್ ಫೋನ್ ಮೂಲಕ ಹೈದರಾಬಾದಿನ ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ SRH (ಸನ್ ರೈಸರ್ಸ್ ಹೈದರಾಬಾದ್) ಮತ್ತು MI (ಮುಂಬೈ ಇಂಡಿಯನ್ಸ್) ತಂಡಗಳ ನಡುವೆ ನಡೆಯುವ IPL T20 ಕ್ರಿಕೆಟ್ ಮ್ಯಾಚ್ಗೆ ಸಂಬಂಧಪಟ್ಟು, ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಾ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿರುವ ಬಗ್ಗೆ ಗುಪ್ತ ಮಾಹಿತಿ ದೊರಕಿದೆ ಎನ್ನಲಾಗಿದೆ.
ಈ ಬಗ್ಗೆ ಮೇಲಾಧಿಕಾರಿಯವರ ಸೂಚನೆಯಂತೆ ಕೂಡಲೇ ಪೊಲೀಸರು ಸ್ಥಳಕ್ಕೆ ಹೋದಾಗ ಅಲ್ಲಿ ಕೆಎ-20-ಎಂ.ಎಫ್-1440 ನೇ ಕಾರಿನ ಪಕ್ಕದಲ್ಲಿ ನಿಂತು 1)ಸಂದೀಪ್ (34) ನೂಜಿ, ಕುಂದಾಪುರ ತಾಲೂಕು 2)ಶ್ರೀರಾಜ್ (33), ಬೇಳೂರು ಗ್ರಾಮ, ಕುಂದಾಪುರ ತಾಲೂಕು ಮತ್ತು 3) ಮಧುಕರ್ (44), ಮೊಳಹಳ್ಳಿ, ಕುಂದಾಪುರ ತಾಲೂಕು ಎಂಬವರು ಆಕ್ರಮವಾಗಿ ಬೆಟ್ಟಿಂಗ್ ದಂಧೆ ನಡೆಸುತ್ತಾ ಇತರೇ ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಅವರವರ ತಂಡವನ್ನು ತಿಳಿಸಿ ಅವರಿಂದ ಹಣವನ್ನು ಸಂಗ್ರಹ ಮಾಡುತ್ತಾ ಅವರಿಗೆ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನನ್ನು ಡೌನ್ಲೋಡ್ ಮಾಡಿಕೊಟ್ಟಿದ್ದು, ಇವರ ಬಳಿ ಸಾರ್ವಜನಿಕರಿಂದ ಆಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಬಗ್ಗೆ ಸಂಗ್ರಹ ಮಾಡಿದ ನಗದು ಹಣ ರೂ, 81,700/= ನ್ನು, 4 ಮೊಬೈಲ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಕೆಎ-20-ಎಂ.ಎಫ್-1440 ನೇ ಕಾರು, 20 ಸ್ಕ್ರೀನ್ ಶಾಟ್ ಮತ್ತು ಡೂಪ್ಲೀಕೇಟ್ ಡೀಲ್ ಮತ್ತು ಆರ್.ಸಿ ಯನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ .
ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಕಲಂ: 78 KP ACT ಮತ್ತು 112 BNS ರಂತೆ ಪ್ರಕರಣ ದಾಖಲಾಗಿದೆ..