Spread the love
  • ಶಿರ್ವಾ: ದಿನಾಂಕ:30-04-2025(ಹಾಯ್ ಉಡುಪಿ ನ್ಯೂಸ್) ಬಂಟಕಲ್ಲು ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಶಿರ್ವ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಂಜುನಾಥ ಮರಬದ ಅವರು ಬಂಧಿಸಿದ್ದಾರೆ.
  • ಶಿರ್ವ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಂಜುನಾಥ ಮರಬದ ಅವರು ದಿನಾಂಕ 27/04/2025 ರಂದು ಬೆಳಗ್ಗೆ ಕಾಪು ತಾಲೂಕು ಶಿರ್ವ ಗ್ರಾಮದ ಬಂಟಕಲ್ಲು ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಗಾಂಜಾವನ್ನು ಸಿಗರೇಟ್ನಲ್ಲಿ ಸೇರಿಸಿ ಸೇದುತ್ತಿದ್ದ ಆಪಾದಿತರಾದ ಶಿವಪ್ರಸಾದ (30) ಮತ್ತು ಆಲ್ವೀನ್ ಶರೂನ್ ಡಿ ಅಲ್ಮೇಡ (29) ಎಂಬವರನ್ನು  ಬಂಧಿಸಿ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆಪಾದಿತರು ಗಾಂಜಾ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ವರದಿ ಬಂದಿದೆ ಎನ್ನಲಾಗಿದೆ.
  • ಈ ಬಗ್ಗೆ ಶಿರ್ವಾ ಪೊಲೀಸ್‌ ಠಾಣೆಯಲ್ಲಿ ಕಲಂ: 27(b) NDPS Act ರಂತೆ ಪ್ರಕರಣ ದಾಖಲಾಗಿದೆ.
error: No Copying!