
ಬೈಂದೂರು: ದಿನಾಂಕ:17-05-2025 (ಹಾಯ್ ಉಡುಪಿ ನ್ಯೂಸ್) ಶಿರೂರು ಮಾರ್ಕೆಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ಯುವಕನನ್ನು ಬೈಂದೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ತಿಮ್ಮೇಶ್ ಬಿ ಎನ್ ಅವರು ಬಂಧಿಸಿದ್ದಾರೆ.
ಬೈಂದೂರು ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ತಿಮ್ಮೇಶ್ ಬಿ ಎನ್ ಅವರು ದಿನಾಂಕ 15/05/2025 ರಂದು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಶಿರೂರು ಮಾರ್ಕೆಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಕುಳಿತು ಅಮಲಿನಲ್ಲಿರುವುದಾಗಿ ಸಾರ್ವಜನಿಕರು ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಹೋದಾಗ ಶಿರೂರು ಮಾರ್ಕೆಟ್ ಬಳಿ ಓರ್ವ ವ್ಯಕ್ತಿ ಕುಳಿತುಕೊಂಡಿದ್ದು, ಆತನನ್ನು ಪೊಲೀಸರು ಮಾತನಾಡಿಸಿದಾಗ ಆತನು ತೊದಲುತ್ತ ಮಾತನಾಡಿದ್ದು, ಆತನು ಯಾವುದೋ ಅಮಲು ಪದಾರ್ಥ ಸೇವಿಸಿ ಅಮಲಿನಲ್ಲಿರುವುದು ಕಂಡು ಬಂದಿದೆ ಎನ್ನಲಾಗಿದೆ.
ಆತನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವಂತೆ ಅನುಮಾನ ಬಂದ ಮೇರೆಗೆ ಆತನ ಹೆಸರು ವಿಚಾರಿಸಿದಾಗ ಬಾತ್ಯಾ ಸುಪೇಲ್ (23) ಎಂಬುದಾಗಿ ತಿಳಿಸಿದ್ದು ಆತನನ್ನು ವೈದ್ಯಕೀಯ ಪರೀಕ್ಷೆ ಬಗ್ಗೆ ಬೈಂದೂರು ಸಮುದಾಯ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದು, ಆತನನ್ನು ಪರೀಕ್ಷಿಸಿದ ವೈದ್ಯರು ಆತನು ಗಾಂಜಾ ಸೇವಿಸಿರುವುದನ್ನು ದೃಢಪಡಿಸಿ ವರದಿ ನೀಡಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಕಲಂ 27 (b) NDPS ರಂತೆ ಪ್ರಕರಣ ದಾಖಲಾಗಿದೆ.