Spread the love

ಉಡುಪಿ: ದಿನಾಂಕ:31-05-2025(ಹಾಯ್ ಉಡುಪಿ ನ್ಯೂಸ್) ವಿದೇಶದಲ್ಲಿ ಉದ್ಯೋಗದಲ್ಲಿದ್ದು  ಇದೀಗ ಊರಿನಲ್ಲಿರುವ ವ್ಯಕ್ತಿ ಯೊಬ್ಬರಿಗೆ ಫೇಸ್ಬುಕ್ ನಲ್ಲಿ ಪರಿಚಯವಾದ ಮಹಿಳೆ ಯೋರ್ವರು ಟ್ರೇಡಿಂಗ್ ನಲ್ಲಿ ಹಣ ಹೂಡಿಕೆ ಮಾಡುವಂತೆ ನಂಬಿಸಿ 7500000 ಲಕ್ಷ ವಂಚನೆ ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಕಾಪು ತಾಲೂಕು ಶಂಕರಪುರ ನಿವಾಸಿ ಜೊಸ್ಸಿ ರವೀಂದ್ರ ಡಿಕ್ರೂಸ್ ಅವರು  ವಿದೇಶದಲ್ಲಿ ಮ್ಯಾನೆಜರ್ ಆಗಿ ಉದ್ಯೋಗದಲ್ಲಿದ್ದು ಅನಾರೋಗ್ಯದ ಕಾರಣದಿಂದ 2 ವರ್ಷದ ಹಿಂದೆ ಊರಿಗೆ ಬಂದಿರುತ್ತಾರೆ.ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಜೊಸ್ಸಿ ರವೀಂದ್ರ ಡಿಕ್ರೂಸ್ ಅವರಿಗೆ ಫೇಸ್ ಬುಕ್ ಮೂಲಕ Arohi Agarwal ಎಂಬ ಮಹಿಳೆಯ ಪರಿಚಯವಾಗಿದ್ದು 2025ರ ಫೆಬ್ರವರಿ ತಿಂಗಳಲ್ಲಿ ಅವಳ ವಾಟ್ಸಾಪ್ ನಂಬ್ರ ನೀಡಿದ್ದು ಜೊಸ್ಸಿ ರವೀಂದ್ರ ಡಿಕ್ರೂಸ್ ಅವರು ಅದರಲ್ಲಿ ಚಾಟ್ ಮಾಡುತ್ತಿದ್ದು ಅವಳು FXCM Gold Trading ಗೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರುತ್ತದೆ ಎಂದು ಮೆಸೇಜ್ ಮಾಡಿದ್ದು ಅದನ್ನು ನಂಬಿದ ಜೊಸ್ಸಿ ರವೀಂದ್ರ ಡಿಕ್ರೂಸ್ ರವರು ತಮ್ಮ ಶಂಕರಪುರ ಕೆನರಾ ಬ್ಯಾಂಕ್ ಖಾತೆಯಿಂದ ದಿನಾಂಕ 09/04/2025 ರಿಂದ 12/05/2025ರ ವರೆಗೆ ಹಂತ ಹಂತವಾಗಿ ಒಟ್ಟು 75,00,000/- ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುತ್ತಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಅದರೆ ಅಪರಿಚಿತ ವ್ಯಕ್ತಿಗಳು ಈತನಕ ಜೊಸ್ಸಿ ರವೀಂದ್ರ ಡಿಕ್ರೂಸ್ ರವರು ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಹಣವನ್ನಾಗಲೀ ಅಥವಾ ಲಾಭಾಂಶನ್ನಾಗಲಿ ನೀಡದೇ ವಂಚನೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ  ಕಲಂ: 66(ಸಿ) 66(ಡಿ)ಐ.ಟಿ. ಆಕ್ಟ ಮತ್ತು 318(4)ಬಿಎನ್‌ಎಸ್‌ ರಂತೆ ಪ್ರಕರಣ ದಾಖಲಾಗಿದೆ.

error: No Copying!