Spread the love

ಉಡುಪಿ: ದಿನಾಂಕ: 29-05-2025(ಹಾಯ್ ಉಡುಪಿ ನ್ಯೂಸ್) ಭುಜಂಗ ಪಾರ್ಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಯುವಕನನ್ನು ಸೆನ್ ಅಪರಾಧ ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರು ಬಂಧಿಸಿದ್ದಾರೆ.

ಉಡುಪಿ ಸೆನ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರು ದಿನಾಂಕ:28-05-2025ರಂದು ಅಜ್ಜರಕಾಡು ಭುಜಂಗ ಪಾರ್ಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ  ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ಯುವಕನನ್ನು  ವಿಚಾರಣೆ ನಡೆಸಿದಾಗ ಆತನು ಮೂಡನಿಡಂಬೂರು ಗ್ರಾಮದ ಅಕ್ಷಯ್ (23) ಎಂದು ತಿಳಿಸಿದ್ದು ಆತನನ್ನು ಮಾದಕವಸ್ತು ಸೇವನೆ ಮಾಡಿದ್ದ ಅನುಮಾನದ ಮೇರೆಗೆ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ತಪಾಸಣೆಗೊಳಪಡಿಸಿದ್ದು, ವೈದ್ಯರು ನೀಡಿದ ವರದಿಯಲ್ಲಿ ಆರೋಪಿಯು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎನ್ನಲಾಗಿದೆ.

ಈ ಬಗ್ಗೆ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಕಲಂ 27 (b) ಎನ್‌.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ. ಅಜ್ಜರಕಾಡು ಭುಜಂಗ ಪಾರ್ಕ್ ಪರಿಸರದಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು ಈ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸಿ ಗಾಂಜಾ ಮಾರಾಟ ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

error: No Copying!