
ಉಡುಪಿ: ದಿನಾಂಕ :02-06-2025(ಹಾಯ್ ಉಡುಪಿ ನ್ಯೂಸ್) ಕುಂಜಿಬೆಟ್ಟು ಫಿಶ್ ಮಾರ್ಕೆಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ನಾರಾಯಣ ಬಿ ಅವರು ಬಂಧಿಸಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ನಾರಾಯಣ ಬಿ ಅವರು ದಿನಾಂಕ: 02/06/2025 ರಂದು ಠಾಣೆಯ ಸಿಬ್ಬಂದಿಯವರೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ಇರುವಾಗ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಬಿಜೆಪಿ ಆಫೀಸ್ ರಸ್ತೆಯ ಫಿಶ್ ಮಾರ್ಕೆಟ್ ಬಳಿ ಗೂಡಂಗಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಸಾರ್ವಜನಿಕರನ್ನು ಸೇರಿಸಿಕೊಂಡು ಮಟ್ಕಾ ಜುಗಾರಿ ಆಟ ಆಡಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿರುವುದಾಗಿ ಮಾಹಿತಿದಾರರೊಬ್ಬರು ನೀಡಿದ ಖಚಿತ ಮಾಹಿತಿ ಮೇರೆಗೆ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಂತೆ ಕೂಡಲೇ ಸ್ಥಳಕ್ಕೆ ತೆರಳಿ ನೋಡಿದಾಗ ವ್ಯಕ್ತಿ ಯೋರ್ವ ಸಾರ್ವಜನಿಕರಿಂದ ಹಣ ಪಡೆದುಕೊಂಡು ಚೀಟಿಯಲ್ಲಿ ನಂಬ್ರ ಬರೆದು ಕೊಡುತ್ತಿರುವ ಸ್ಥಳಕ್ಕೆ ಸಿಬ್ಬಂದಿಯವರೊಂದಿಗೆ ಧಾಳಿ ನಡೆಸಿದ್ದಾರೆ.
ಸ್ಥಳದಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಹಣ ಸಂಗ್ರಹಿಸಿ ಚೀಟಿ ಬರೆದು ಕೊಡುತ್ತಿದ್ದ ಆರೋಪಿ ದಿವಾಕರ ಎ ಎಂಬವನನ್ನು ಪೊಲೀಸರು ವಿಚಾರಿಸಿದಾಗ ಆತನು ನಾನು ಕಮಿಷನ್ ಹಣದ ಆಸೆಗಾಗಿ ಅಂಬಾಗಿಲಿನ ಲಿಯೋ ಕರ್ನೇಲಿಯೋ ಎಂಬವರು ತಿಳಿಸಿದಂತೆ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಅಂಕೆ ಸಂಖ್ಯೆಗಳ ಮೇಲೆ ಹಣ ಹೂಡುವಂತೆ ಹೇಳಿ ಚೀಟಿಯಲ್ಲಿ ನಮೂದು ಮಾಡಿಕೊಂಡು ಹಣವನ್ನು ಸಂಗ್ರಹಿಸುತ್ತಿರುವುದಾಗಿ ತಿಳಿಸಿರುತ್ತಾನೆ ಎನ್ನಲಾಗಿದೆ. ಸಂಗ್ರಹಿಸಿದ ಹಣವನ್ನು ಲಿಯೋ ಕರ್ನೇಲಿಯೋ ರವರಿಗೆ ಕೊಡುತ್ತಿರುವುದಾಗಿ ಒಪ್ಪಿಕೊಂಡಿರುತ್ತಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 78 (i) (iii) Karnataka Police Act &ಕಲಂ: 112 BNS ರಂತೆ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಹರಿರಾಂ ಶಂಖರ್ ಅವರು ಅಧಿಕಾರ ವಹಿಸಿಕೊಂಡ ಕೂಡಲೇ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಮಟ್ಕಾ ದಂಧೆಯ ಅಡ್ಡೆಗಳಿಗೆ ನಿರಂತರ ದಾಳಿ ನಡೆಸಿದ್ದಾರೆ. ನೂತನ ಎಸ್ಪಿ ಹರಿರಾಂ ಶಂಕರ್ ಅವರ ಈ ಕ್ರಮ ವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಉಡುಪಿ ಜಿಲ್ಲೆಯಿಂದ ಮಟ್ಕಾ ದಂಧೆಯನ್ನು ಬುಡ ಸಮೇತ ಕಿತ್ತು ಹಾಕಲು ನೂತನ ಎಸ್ಪಿಯವರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲೆಯ ಜನರು ಆಗ್ರಹಿಸಿದ್ದಾರೆ.