
ಕೋಟ : ದಿನಾಂಕ 04-06-2025(ಹಾಯ್ ಉಡುಪಿ ನ್ಯೂಸ್) ಸಾಯ್ಬ್ರಕಟ್ಟೆ ರಿಕ್ಷಾ ನಿಲ್ದಾಣದ ಬಳಿ ಐಪಿಲ್ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆ ನಡೆಸುತ್ತಿದ್ದ ಮೂವರು ಯುವಕರನ್ನು ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ ಸಿ ಅವರು ಬಂಧಿಸಿದ್ದಾರೆ.
- ಕೋಟ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ ಸಿ ಅವರಿಗೆ ದಿನಾಂಕ :03-06-2025 ರಂದು ಬ್ರಹ್ಮಾವರ ತಾಲ್ಲೂಕು ಶಿರಿಯಾರ ಗ್ರಾಮದ ಸಾಹೈಬರಕಟ್ಟೆ ರಿಕ್ಷಾ ನಿಲ್ದಾಣದ ಸಮೀಪದಲ್ಲಿ ಕೆಲಮಂದಿ ಯುವಕರು ಜೊತೆಯಾಗಿ ಸೇರಿಕೊಂಡು RCB (ರಾಯಲ್ ಚಾಲೆಂಜ್ ಬೆಂಗಳೂರು ) ಮತ್ತು PBKS ( ಪಂಜಾಬ್ ಕಿಂಗ್ಸ್ ) ತಂಡಗಳ ನಡುವೆ ನಡೆಯುವ IPL T20 ಕ್ರಿಕೆಟ್ ಪೈನಲ್ ಮ್ಯಾಚ್ಗೆ ಸಂಬಂಧಪಟ್ಟು, ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಾ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ತೆರಳಿದ್ದಾರೆ.
- ಸಾಹೈಬರಕಟ್ಟೆ ರಿಕ್ಷಾ ನಿಲ್ದಾಣದ ಸಮೀಪ ಮೊಬೈಲ್ ಪೋನ್ ಹಿಡಿದುಕೊಂಡು RCB ಮತ್ತು PBKS ಎಂದು ಹೇಳಿ ಕ್ರಿಕೆಟ್ ಬೆಟ್ಟಿಂಗ್ ವೆಬ್ಸೈಟ್ ಮುಖಾಂತರ 3ನೇ ಆರೋಪಿತ ಚಂದ್ರ ಜನ್ನಾಡಿ ಎಂಬಾತನ ಜೊತೆ ಸೇರಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ App Online ಮೂಲಕ ಆಡುತ್ತಿದ್ದ 1 ನೇ ಆರೋಪಿತ ಶಿವರಾಜ್ ಹಾಗೂ ಬೆಟ್ಟಿಂಗ್ ಆಡಿಸುತ್ತಿದ್ದ 2 ನೇ ಆರೋಪಿತ ಪ್ರದೀಪ ಎಂಬಾತನನ್ನು ಬಂಧಿಸಿ ವಶಕ್ಕೆ ಪಡೆದು ಕ್ರಿಕೆಟ್ ಬೆಟ್ಟಿಂಗ್ ಗೆ ಬಳಸಿದ 3 ಮೊಬೈಲ್ ಪೋನ್ ನ್ನು ಸ್ವಾದೀನಪಡಿಸಿಕೊಂಡಿದ್ದಾರೆ.
- ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಕಲಂ: 112 BNS & 78 (i)(iii) KP Act ರಂತೆ ಪ್ರಕರಣ ದಾಖಲಾಗಿದೆ .