
ಉಡುಪಿ: ದಿನಾಂಕ:05-06-2025(ಹಾಯ್ ಉಡುಪಿ ನ್ಯೂಸ್)
ಇತ್ತೀಚೆಗೆ ನಡೆದ ಥಗ್ ಲೈಫ್ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳು ನಟ ಕಮಲ್ ಹಾಸನ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆ ಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣದ) ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.
ತಮಿಳು ನಟ ಕಮಲ್ ಹಾಸನ್ ಇತ್ತೀಚೆಗೆ ನಡೆದ ಥಗ್ ಲೈಫ್ ಚಲನಚಿತ್ರ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ “ಕನ್ನಡ ಹುಟ್ಟಿದ್ದು ತಮಿಳಿನಿಂದ” ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರಿಗೆ ಅಪಮಾನ ಮಾಡಿರುವುದಲ್ಲದೆ ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡಿರುತ್ತಾರೆ. ಅಲ್ಲದೆ, ಕನ್ನಡಿಗರ ಹಾಗೂ ತಮಿಳರ ಮಧ್ಯೆ ವಿಷ ಬೀಜ ಬಿತ್ತುವುದರೊಂದಿಗೆ ಪ್ರತಿ ಬಾರಿ ತಮಿಳು ಹೊಸ ಚಲನಚಿತ್ರ ಬಿಡುಗಡೆ ಸಂದರ್ಭದಲ್ಲಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಮಾಡುತ್ತಲೇ ಬಂದಿದ್ದಾರೆ. ಈ ರೀತಿಯ ಹೇಳಿಕೆಗಳನ್ನು ನಿರಂತರವಾಗಿ ನೀಡುತ್ತಿರುತ್ತಾರೆ ಹಾಗೂ ಇಲ್ಲಿನ ಕನ್ನಡಿಗರು ಮತ್ತು ತಮಿಳರ ಮಧ್ಯೆ ಇರುವ ಸಾಮರಸ್ಯವನ್ನು ಹದಗೆಡುವಂತೆ ಮಾಡಿ ಶಾಂತಿ ಸುವ್ಯವಸ್ಥೆಗೆ ತೊಂದರೆ ಮಾಡುತ್ತಾರೆ.
ಆದ್ದರಿಂದ ಕನ್ನಡ ವಿರೋಧಿ ಹೇಳಿಕೆ ನೀಡಿರುವ ಕಮಲ ಹಾಸನ್ ವಿರುದ್ಧ ಕಾನೂನು ರೀತಿಯಲ್ಲಿ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣದ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಸಂದರ್ಭದಲ್ಲಿ ಕರವೇ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ , ಜಿಲ್ಲಾ ಅಧ್ಯಕ್ಷ
ಸುಜಯ ಪೂಜಾರಿ,ಜಿಲ್ಲಾ ಉಪಾಧ್ಯಕ್ಷ ಸೈಯದ್ ನಿಜಾಮ್. ಅಲ್ಫೋನ್ಸ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಪೂಜಾರಿ. ಕಾಪು ತಾಲೂಕು ಅಧ್ಯಕ್ಷ ಚೇತನ್ ಪಡುಬಿದ್ರೆ. ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ. ಮಹಿಳಾ ಉಪಾಧ್ಯಕ್ಷೆ ದೇವಕಿ ಬಾರ್ಕೂರು. ಮಹಿಳಾ ಕಾರ್ಯದರ್ಶಿ ಚಂದ್ರಕಲಾ. ಜಿಲ್ಲಾ ಘಟಕದ ಸದಸ್ಯರಾದ ನಾಗರಾಜ್.ವಿಶ್ವ ಮತ್ತು ಕರವೇಯ ಸದಸ್ಯರುಗಳು ಉಪಸ್ಥಿತರಿದ್ದರು ಎಂದು ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿದ್ದಾರೆ.