Spread the love
  • ಕುಂದಾಪುರ: ದಿನಾಂಕ 08/06/2025(ಹಾಯ್ ಉಡುಪಿ ನ್ಯೂಸ್) ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಅಮಲಿನಲ್ಲಿದ್ದ ಇಬ್ಬರು ಯುವಕರನ್ನು ಕುಂದಾಪುರ ಪೊಲೀಸ್ ಠಾಣೆಯ ಎಎಸ್ಐ ಧರ್ಮೇಂದ್ರ ಅವರು ಬಂಧಿಸಿದ್ದಾರೆ.
  •   ಕುಂದಾಪುರ ಪೊಲೀಸ್ ಠಾಣೆಯ ಎಎಸ್ಐ ಧರ್ಮೇಂದ್ರ ಅವರು ದಿನಾಂಕ :07-06-2025 ರಂದು ಕುಂದಾಪುರ ತಾಲೂಕು ವಡೇರಹೋಬಳಿ ಗ್ರಾಮದ ಶಾಸ್ತ್ರೀ ಸರ್ಕಲ್‌ ಬಳಿ ಕರ್ತವ್ಯದಲ್ಲಿ ಇರುವಾಗ ಒಬ್ಬ ವ್ಯಕ್ತಿಯು ತೂರಾಡಿಕೊಂಡು ಅಮಲಿನಲ್ಲಿರುವುದು ಕಂಡುಬಂದಿದ್ದು ಅವನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಆತನು ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದ ಮೇರೆಗೆ ಆತನನ್ನು  ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಹೆಸರು ಮಹಮ್ಮದ್‌ ಅಜ್ವಾನ್‌(23) ಎಂದು ತಿಳಿಸಿದ್ದು ಆತನನ್ನು ವೈದ್ಯಕೀಯ ತಪಾಸಣೆ ಬಗ್ಗೆ  ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದರು .
  • ಅದೇ ದಿನ ಕುಂದಾಪುರ ತಾಲೂಕು ಕಸಬಾ ಗ್ರಾಮದ ಪಾರಿಜಾತ ಸರ್ಕಲ್‌ ಬಳಿ ಕರ್ತವ್ಯದಲ್ಲಿ ಇರುವಾಗ ಒಬ್ಬ ವ್ಯಕ್ತಿಯು ತೂರಾಡಿಕೊಂಡು ಅಮಲಿನಲ್ಲಿರುವುದು ಕಂಡುಬಂದಿದ್ದು ಆತನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಆತನು ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದ ಮೇರೆಗೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು  ಆತನ ಹೆಸರು ಮಹಮ್ಮದ್‌ ಶಫೀಕ್‌(18) ಎಂದು ತಿಳಿಸಿದ್ದು, ಆತನನ್ನು ವೈದ್ಯಕೀಯ ತಪಾಸಣೆ ಬಗ್ಗೆ ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದರು . ಇಬ್ಬರನ್ನೂ ಪರೀಕ್ಷಿಸಿದ ವೈದ್ಯರು ಆಪಾದಿತ ಮಹಮ್ಮದ್ ಅಜ್ವಾನ್ , ಮತ್ತು ಮಹಮ್ಮದ್‌ ಶಫೀಕ್‌  ಇಬ್ಬರೂ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿರುವುದಾಗಿ ವರದಿ ನೀಡಿದ್ದಾರೆ ಎನ್ನಲಾಗಿದೆ.ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ .

ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ  ಕಲಂ:27(b) NDPS Act ರಂತೆ ಪ್ರಕರಣ ದಾಖಲಾಗಿದೆ.

    error: No Copying!