
ಕಾಪು: ದಿನಾಂಕ 08/06/2025 (ಹಾಯ್ ಉಡುಪಿ ನ್ಯೂಸ್) ಮೂಳೂರು ನಾರಾಯಣ ಗುರು ಸಭಾಭವನದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಅಮಲಿನಲ್ಲಿದ್ದ ಯುವಕನನ್ನು ಕಾಪು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ತೇಜಸ್ವಿ ಟಿ ಐ ಅವರು ಬಂಧಿಸಿದ್ದಾರೆ.
ಕಾಪು ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ತೇಜಸ್ವಿ ಟಿ ಐ ಅವರು ದಿನಾಂಕ :06-06-2025 ರಂದು ಹಗಲು ರೌಂಡ್ಸ್ ಕರ್ತವ್ಯದಲ್ಲಿರುವಾಗ ಕಾಪು ತಾಲೂಕು ಮೂಳೂರು ಗ್ರಾಮದ ಮೂಳೂರು ನಾರಾಯಣಗುರು ಸಭಾಭವನ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ಯುವಕನು ಗಾಂಜಾ ಎಂಬ ಮಾದಕ ದ್ರವ್ಯವನ್ನು ಸೇವನೆ ಮಾಡಿ ಅಮಲಿನಲ್ಲಿರುವುದಾಗಿ ಬಂದ ಸಾರ್ವಜನಿಕ ಮಾಹಿತಿ ಮೇರೆಗೆ ಕೂಡಲೇ ಸ್ಥಳಕ್ಕೆ ತೆರಳಿದ್ದಾರೆ.
ಸ್ಥಳದಲ್ಲಿ ನೋಡಿದಾಗ ಒಬ್ಬ ಯುವಕನು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ, ಅದರ ಅಮಲಿನಲ್ಲಿದ್ದಂತೆ ಕಂಡು ಬಂದಿದ್ದು, ಆತನನ್ನು ವಿಚಾರಿಸಿದಾಗ ತನ್ನ ಹೆಸರು ಅನಿಲ್ (23) ಎಂಬುದಾಗಿ ತಿಳಿಸಿರುತ್ತಾನೆ ಎಂದಿದ್ದಾರೆ. ಆತ ಗಾಂಜಾ ಸೇವಿಸಿರುವ ಬಗ್ಗೆ ಫೊರೆನ್ಸಿಕ್ ಮೆಡಿಸಿನ್ ವಿಭಾಗ, ಕೆ.ಎಂ.ಸಿ. ಆಸ್ಪತ್ರೆ ಇಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ದಿನಾಂಕ 07/06/2025 ರಂದು ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ತಜ್ಞರ ವರದಿಯಲ್ಲಿ ಆಪಾದಿತ ಗಾಂಜಾ ಸೇವಿಸಿರುವುದು ಧೃಡಪಟ್ಟಿದೆ ಎನ್ನಲಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಕಲಂ: 27 (b) NDPS ರಂತೆ ಪ್ರಕರಣ ದಾಖಲಾಗಿದೆ.