
ಉದ್ಯಾವರ: ದಿನಾಂಕ:14-06-2025(ಹಾಯ್ ಉಡುಪಿ ನ್ಯೂಸ್) ಉದ್ಯಾವರ ಗ್ರಾಮದ ನಿವಾಸಿ ಸುಶೀಲ (62) ಅವರ ಹಿರಿಯ ಮಗ ಮಧುಕರ (42) ಎಂಬವರು ಅವಿವಾಹಿತ ರಾಗಿದ್ದು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರೆನ್ನದಾಗಿದೆ.
ಕಳೆದ ಎರಡು ದಿನಗಳಿಂದ ಮೀನುಗಾರಿಕೆಗೆ ರಜೆ ಇದ್ದ ಕಾರಣ ಮನೆಯಲ್ಲೇ ಇದ್ದ ಮಧುಕರ ಅವರು ದಿನಾಂಕ :14-06-2025 ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತಾನು ಮಲಗುವ ಕೋಣೆಯಲ್ಲಿನ ಪಕ್ಕಾಸಿಗೆ ನೈಲಾನ್ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮದುವೆಯಾಗದೆ ಖಿನ್ನತೆಗೆ ಒಳಗಾಗಿಯೋ ಅಥವಾ ಇನ್ನಾವುದೋ ಕಾರಣದಿಂದ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಅವರ ತಮ್ಮ ಗಂಗಾಧರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಕಲಂ 194 BNSS ರಂತೆ ಪ್ರಕರಣ ದಾಖಲಾಗಿದೆ.