Spread the love

ದಿನಾಂಕ:29-06-2025(ಹಾಯ್ ಉಡುಪಿ ನ್ಯೂಸ್)

ಕೋಟ: ಕೋಟ ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿಸಹಕಾರಿ ಮಿತ್ರರು ತಂಡದಿoದ ಚುನಾವಣೆಗೆ ಸ್ಪಧಿಸಿದ ಪ್ರೇಮಾ ಗಣೇಶ್ ಅವರು ಕೇವಲ ಒಂದು ಮತದಿಂದ ಸೋಲನ್ನಪ್ಪಿದ್ದರು. ಚುನಾವಣೆಯಲ್ಲಿ ಕನಿಷ್ಠ ಮತಗಳ ಅಂತರದಿoದ ಸೋತಾಗ ಮರು ಎಣಿಕೆ ಕೋರುವುದು ಕಾನೂನಾತ್ಮಕ ಹಕ್ಕಾಗಿದ್ದು ನ್ಯಾಯಾಲಯ ಕೂಡ ಈ ಹಕ್ಕನ್ನು ಎತ್ತಿ ಹಿಡಿದಿದೆ ಎಂದು ಸಹಕಾರಿ ಮಿತ್ರರು ತಂಡದ ಮುಖಂಡ, ಕೋಟ ಸಹಕಾರಿ ವ್ಯವಸಾಯಿಕ ಸಂಘದ
ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಅವರು ಜೂ.28ರಂದು ಕೋಟದ ಸಮುದ್ಯತಾ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಉಮಾ ಗಾಣಿಗ ಹಾಗೂ ಪ್ರೇಮಾ ಗಣೇಶ್ ನಡುವಿನ ಸ್ಪರ್ಧೆಯಲ್ಲಿ 620 ಮತಗಳು ಅಸಿಂಧುವಾಗಿದ್ದವು. ಹೀಗಾಗಿ ಸಹಜವಾಗಿ ಅಸಿಂಧು ಮತಗಳನ್ನು ಕುಲಂಕುಶವಾಗಿ ಪರಿಶೀಲಿಸಿದರೆ ಕೆಲವು ನಮ್ಮ ಪರವಾಗಿ ಇರಬಹುದು ಎನ್ನುವ ಆಸೆ ಎರಡೂ ಕಡೆಯವರಿಗೆ ಇರುತ್ತದೆ. ಅದರಂತೆ ಮರು ಎಣಿಕೆಗೆ ಅವಕಾಶ ಕೋರಲಾಗಿದೆ ಈ ವಿಚಾರದಲ್ಲಿ ಅನಗತ್ಯ ರಾಜಕೀಯ ಸಲ್ಲ ಬದಲಾಗಿ ಯಾರೇ ಅಭ್ಯರ್ಥಿಗಳಾದರೂ ಈ ರೀತಿಯ ಯೋಚನೆಗಳು ಅಥವಾ ಕಾನೂನಾತ್ಮಕ ಹೋರಾಟ ಅನಿವಾರ್ಯ  ಎಂದರಲ್ಲದೆ ಬಿಜೆಪಿಯವರು ನಡೆಸಿದ ಪ್ರತಿಭಟನೆ ಮತ್ತು ಸಂಘದ ಸಿಇಓ ಅವರನ್ನು ಎಳೆದು ತಂದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಪರಾಜಿತ ಅಭ್ಯರ್ಥಿ ಪ್ರೇಮಾ ಗಣೇಶ್ ಜೂ.29ರಂದು ನಡೆಯುವ ಮರು ಎಣಿಕೆಯಲ್ಲಿ ಯಾವುದೇ ರೀತಿಯ ಫಲಿತಾಂಶ ಬಂದರೂ ಅದನ್ನು ಗೌರವದಿಂದ ಸ್ವೀಕರಿಸಲು ಸಿದ್ಧವಾಗಿದ್ದೇನೆ ಎಂದು ತಿಳಿಸಿದರು.

ಎ.ಆರ್. ಕಚೇರಿ ಎದುರು ಪ್ರತಿಭಟನೆ ಮಾಡುವ ಮೂಲಕ ಬಿಜೆಪಿಯವರು ಸಹಕಾರಿ ವ್ಯವಸ್ಥೆಯನ್ನು ಸಂಪೂರ್ಣ ರಾಜಕೀಯಗೊಳಿಸಿ ಸಣ್ಣತನ ಮೆರೆದಿದ್ದಾರೆ. ಉಚ್ಛ ನ್ಯಾಯಾಲಯ ಮರುಎಣಿಕೆ ಆದೇಶವನ್ನು ಪುರಸ್ಕರಿಸಿದ ಮೇಲೂ ಪ್ರತಿಭಟನೆ ಮಾಡಿರುವುದು ಕಾನೂನಿಗೆ ತೋರಿದ ಅಗೌರವವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್ ತಿಳಿಸಿದರು. ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ನಾಗರಾಜ ಹಂದೆ, ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ ಹಾಗೂ ನಿರ್ದೇಶಕರು, ಸಹಕಾರಿ ಮಿತ್ರರು ತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿದ್ದರು.

ಕೋಟ ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿಸಹಕಾರಿ ಮಿತ್ರರು ತಂಡದಿoದ ಶನಿವಾರ ಪತ್ರಿಕಾಗೋಷ್ಟಿ ಜರಗಿತು. ಕೋಟ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್ ಮತ್ತಿತರರು ಇದ್ದರು.

error: No Copying!