Spread the love

ಉಡುಪಿ: ದಿನಾಂಕ:04-07-2025(ಹಾಯ್ ಉಡುಪಿ ನ್ಯೂಸ್) ಕರಾವಳಿ ಬೈಪಾಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿ ಯನ್ನು ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಈರಣ್ಣ ಶಿರಗುಂಪಿ ಅವರು ಬಂಧಿಸಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಈರಣ್ಣ ಶಿರಗುಂಪಿ ಅವರಿಗೆ ದಿನಾಂಕ 03/07/2025 ರಂದು ಮಧ್ಯಾಹ್ನ ಮೂಡನಿಡಂಬೂರು ಗ್ರಾಮದ ಕರಾವಳಿ ಬೈಪಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಸಾರ್ವಜನಿಕರನ್ನು ಸೇರಿಸಿಕೊಂಡು ಮಟ್ಕಾ ಜುಗಾರಿ ಆಟ ಆಡಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿರುವುದಾಗಿ  ಬಂದ ಸಾರ್ವಜನಿಕ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.

ಸ್ಥಳದಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಹಣ ಸಂಗ್ರಹಿಸಿ ಚೀಟಿ ಬರೆದು ಕೊಡುತ್ತಿದ್ದ ಆರೋಪಿ ಈಶ್ವರ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ  ತನ್ನ ಸ್ವಂತ ಲಾಭಕ್ಕಾಗಿ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಅಂಕೆ ಸಂಖ್ಯೆಗಳ ಮೇಲೆ ಹಣವನ್ನು ಸಂಗ್ರಹಿಸುತ್ತಿರುವುದಾಗಿ ತಿಳಿಸಿರುತ್ತಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಆಪಾದಿತ ಈಶ್ವರನ ಬಳಿ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ಹಣ ರೂಪಾಯಿ 780/- ಮತ್ತು ಮಟ್ಕಾ ನಂಬ್ರ ಬರೆದ ಚೀಟಿ-3, ಬಾಲ್ಪೆನ್-1 ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ  ಕಲಂ: 78 (iii) Karnataka Police Act ರಂತೆ ಪ್ರಕರಣ ದಾಖಲಾಗಿದೆ.

error: No Copying!