Spread the love

ಉಡುಪಿ: ದಿನಾಂಕ: 05-08-2025 (ಹಾಯ್ ಉಡುಪಿ ನ್ಯೂಸ್) ಸಾಹಿತಿ, ಪತ್ರಕರ್ತ, ಅಂಕಣ ಬರಹಗಾರ ಮರವಂತೆ ಪ್ರಕಾಶ್ ಪಡಿಯಾರ್ (64ವ) ಅವರು ಇಂದು  ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ನಿಧನರಾದರು. ಮೃತರು ಪತ್ನಿ, ಇರ್ವರು ಪುತ್ರಿಯರನ್ನು ಅಗಲಿದ್ದಾರೆ. ಸಾಹಿತ್ಯ,‌ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದ ಪಡಿಯಾರರು, ಗ್ರಾಮೀಣ ಭಾಗದ ಸಮಸ್ಯೆಯ ಕುರಿತು ಬರೆದ ವರದಿಗಳು, ಆಡಳಿತ ವ್ಯವಸ್ಥೆಯ ಗಮನ ಸೆಳೆದು ಫಲಶ್ರುತಿ ಪಡೆಯುತ್ತಿದ್ದವು. ಅವರ ಅನನ್ಯ ಸಾಧನೆಗೆ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿದ್ದವು. ಕೆಲವು ವರ್ಷ ಜೀವಾ ವಿಮಾಜೆಂಟರಾಗಿದ್ದರು. ಮಾಧ್ಯಮಗಳಿಗೆ ಜಾಹೀರಾತು ಸಂಗ್ರಹಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಅನಾರೋಗ್ಯ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದ‌ ಪಡಿಯಾರರು, ಜೀವನ ನಿರ್ವಹಣೆ ಎದುರಿಸಲು ಅಸಹಾಯಕರಾಗಿ ಉಡುಪಿಯಲ್ಲಿ ದಿನಗಳನ್ನು ಕಳೆಯುತ್ತಿದ್ದ ಅವರು  ಳೆದ ಒಂದು ವರ್ಷದಿಂದ ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದಿಧ್ದರು. ಆಶ್ರಮದ ಸಂಚಾಲಕಿ ತನುಲಾ ತರುಣ್ ಅವರು ಆಹಾರ, ಔಷಧೋಪಚಾರ ಒದಗಿಸಿ ನೋಡಿ ಕೊಂಡಿದ್ದಾರೆ.

error: No Copying!