ದಿನಾಂಕ:06-08-2025(ಹಾಯ್ ಉಡುಪಿ ನ್ಯೂಸ್)
ಬೆಳ್ತಂಗಡಿ: ಧರ್ಮಸ್ಥಳ ಪರಿಸರದಲ್ಲಿ ರಹಸ್ಯವಾಗಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ದಿನವೂ ಎಸ್ಐಟಿ ತಂಡ ಸಮಾಧಿ ಅಗೆಯುವ ಕಾರ್ಯದಲ್ಲಿ ತೊಡಗಿತ್ತು. ಎಸ್ಐಟಿಯ ತನಿಖಾಧಿಕಾರಿ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ನಸ್ಟೆಲ್ಲಾ ವರ್ಗೀಸ್ ಮೇಲ್ವಿಚಾರಣೆಯಲ್ಲಿ ಸಾಕ್ಷಿ-ದೂರುದಾರನು ತೋರಿಸಿದ ಸ್ಥಳ ಸಂಖ್ಯೆ 11 ಮತ್ತು 12 ರಲ್ಲಿ ಭಾರೀ ಮಳೆಯ ನಡುವೆಯೂ ಅಗೆಯುವ ಪ್ರಕ್ರಿಯೆ ನಡೆಯಿತು. ಆದರೆ ಯಾವುದೇ ಅವಶೇಷಗಳ ಕುರುಹು ಪತ್ತೆಯಾಗಿಲ್ಲ. ಆದರೆ ಇಲ್ಲಿಯವರೆಗೆ, ಎಸ್ಐಟಿ ಅಗೆದ 12 ಸ್ಥಳಗಳಲ್ಲಿ ಒಂದು ಸ್ಥಳದಲ್ಲಿ ಮಾತ್ರ ಮಾನವ ಅವಶೇಷಗಳು ಪತ್ತೆಯಾಗಿದ್ದು ಪಾಯಿಂಟ್ 13 ಮಾತ್ರ ಬಾಕಿ ಇದೆ. ಈಮಧ್ಯೆ, 2003ರಲ್ಲಿ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ MBBS ವಿದ್ಯಾರ್ಥಿನಿ ಅನನ್ಯ ಭಟ್ ತಾಯಿ ಸುಜಾತಾ ಭಟ್ ಪರ ವಕೀಲರು ನಿನ್ನೆ ಸಮಾಧಿ ಅಗೆದ ಸ್ಥಳದಲ್ಲಿ ಮೂರು ಮಾನವ ಅವಶೇಷಗಳು ಪತ್ತೆಯಾಗಿವೆ ಎಂದು ಹೇಳಿಕೊಂಡಿದ್ದಾರೆ. ಇನ್ನು ಜಯಂತ್ ಎಂಬವರು ಧರ್ಮಸ್ಥಳ ಠಾಣೆಗೆ ನೀಡಿದ್ದ ದೂರನ್ನು ಎಸ್ಐಟಿಗೆ ಹಸ್ತಾಂತರಿಸಲಾಗಿದೆ.
