Spread the love

ಕೋಟ: ದಿನಾಂಕ : 09-08-2025(ಹಾಯ್ ಉಡುಪಿ ನ್ಯೂಸ್) ಬಾಳ್ಕುದ್ರು ಗ್ರಾಮದ ಹಂಗಾರಕಟ್ಟೆ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿ ಯನ್ನು ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ  ಪ್ರವೀಣ್‌ ಕುಮಾರ್‌ ಅವರು ಬಂಧಿಸಿದ್ದಾರೆ.

ಕೋಟ ಪೊಲೀಸ್ ಠಾಣೆಯ ಪೊಲೀಸ್‌ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಅವರು ದಿನಾಂಕ:07-08-2025 ರಂದು ರೌಂಡ್ಸ್‌ ಕರ್ತವ್ಯದಲ್ಲಿರುವಾಗ  ಬ್ರಹ್ಮಾವರ ತಾಲೂಕು ಬಾಳ್ಕುದ್ರು  ಗ್ರಾಮದ ಹಂಗಾರಕಟ್ಟೆ ಬಸ್‌ ನಿಲ್ದಾಣದ ಬಳಿಯ ಗಣೇಶ್‌ ಸೈಕಲ್‌ ರಿಪೇರಿ ಅಂಗಡಿಯ ಬಳಿ ಸಾರ್ವಜನಿಕ ಸ್ಥಳದಲ್ಲಿ  ಮಟ್ಕಾ ಜುಗಾರಿ ಆಡುತ್ತಿರುವುದಾಗಿ ಸಾರ್ವಜನಿಕ ರಿಂದ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಮಾಹಿತಿ ಬಂದ ಸ್ಥಳಕ್ಕೆ ತೆರಳಿದ್ದಾರೆ .

 ಸ್ಥಳದಲ್ಲಿ ಸಾರ್ವಜನಿಕರು ಗುಂಪು ಸೇರಿದ್ದು ಓರ್ವ ವ್ಯಕ್ತಿ 1 ರೂಪಾಯಿಗೆ 70 ರೂಪಾಯಿ ಎಂದು ಜೋರಾಗಿ ಕೂಗುತ್ತಿದ್ದು ಸಂಖ್ಯೆಗಳ ಮೇಲೆ ಸಾರ್ವಜನಿಕರು ಹಣವನ್ನು ಪಣವಾಗಿ ಕಟ್ಟುತಿದ್ದು .ಅವರುಗಳು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟದಲ್ಲಿ ನಿರತರಾಗಿದ್ದು  ಪೊಲೀಸರು ದಾಳಿ ನಡೆಸಿದಾಗ ಉಳಿದವರು ಓಡಿ ಹೋಗಿದ್ದು ನಾಗರಾಜ್‌ ದೇವಾಡಿಗ ಎಂಬವನನ್ನು ಬಂಧಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತನ್ನ ಸ್ವಂತ ಲಾಭಕ್ಕೋಸ್ಕರ ಆಡುತ್ತಿದುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಪೊಲೀಸರು ಆತನ ಪ್ಯಾಂಟ್‌ ಕಿಸೆಯಲ್ಲಿದ್ದ ಜುಗಾರಿ ಆಟಕ್ಕೆ ಬಳಸಿದ ಮಟ್ಕಾ ಚೀಟಿ , ಬಾಲ್‌ ಪೆನ್‌ ಹಾಗೂ ನಗದು 1,200/-ರೂಪಾಯಿ ಹಾಗೂ ಅಲ್ಲದೇ ತಾನು ಸಂತೋಷ ಕೋಟ ಎಂಬವನು ತಿಳಿಸಿದಂತೆ ಮಟ್ಕಾ ಜುಗಾರಿ ಆಟ ಆಡಿಸುತ್ತಿದ್ದು ಇದರಿಂದ ಬಂದ ಹಣವನ್ನು ಸಂತೋಷ ಕೋಟ  ಎಂಬಾತನಿಗೆ ನೀಡುತ್ತಿದ್ದು ಆತನು ತನಗೆ ಕಮೀಷನ್‌ ನೀಡುತ್ತಿರುವುದಾಗಿ ತಿಳಿಸಿರುತ್ತಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಕೋಟ  ಪೊಲೀಸ್‌ ಠಾಣೆಯಲ್ಲಿ  ಕಲಂ:  78 (1)  (111) KP Act ನಂತೆ ಪ್ರಕರಣ ದಾಖಲಾಗಿದೆ.

error: No Copying!