Spread the love

ದಿನಾಂಕ:10-08-2025(ಹಾಯ್ ಉಡುಪಿ ನ್ಯೂಸ್)

ಬೆಂಗಳೂರು : ಬೆಂಗಳೂರು ಮಹಾನಗರದ ಹಲವೆಡೆ ರವಿವಾರ (ಆ.10) ಸಂಜೆ ಧಾರಾಕಾರ ಮಳೆಯಾಗಿದೆ. ಸುರಿದ ಮಳೆಗೆ ಬೆಂಗಳೂರು ಮಹಾನಗರ ತಂಪಾಗಿದೆ. ಆದರೆ, ವೀಕೆಂಡ್​ ಅಂತ ಎಂಜಾಯ್​ ಮಾಡಲು ಹೊರಗಡೆ ಬಂದಿದ್ದ ಜನರು ಮಳೆಯಲ್ಲಿ ಸಿಲುಕಿ ಪರದಾಡಿದರು, ತೊಯ್ದು ನಿರಾಸೆಯಿಂದ ಮನೆಗಳತ್ತ ತೆರಳಿದರು. ಬೆಂಗಳೂರಿನ ಸಸ್ಯಕಾಶಿ ಲಾಲ್​ಬಾಗ್, ಶಾಂತಿನಗರ, ಜಯನಗರ, ವಿಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಸದಾಶಿವನಗರ, ಹೆಬ್ಬಾಳ, ಬಸವನಗುಡಿ, ಬನಶಂಕರಿ, ಚಂದ್ರಲೇಔಟ್, ಕೋರಮಂಗಲ, ಕೋಣನಕುಂಟೆ ಸೇರಿದಂತೆ ಹಲವೆಡೆ ಮಳೆಯಾಗಿದೆ.ಅಲ್ಲದೆ, ವಿಧಾನಸೌಧ, ಮೆಜೆಸ್ಟಿಕ್, ಕುಮಾರಕೃಪಾ ರಸ್ತೆ, ರೇಸ್ ಕೋರ್ಸ್, ವಿಂಡ್ಸರ್ ಮ್ಯಾನರ್, ಕಾರ್ಪೋರೇಶನ್ ಸರ್ಕಲ್​ನ ಸುತ್ತಮುತ್ತ ಕೂಡ ಜೋರು ಮಳೆಯಾಯಿತು. ದಿಢೀರನೆ ಮಳೆ ಬಂದಿದ್ದರಿಂದ ಜನರು ಬಸ್​ ನಿಲ್ದಾಣ, ಅಂಗಡಿಗಳ ಎದುರು ಕೆಲ ಗಂಟೆ ಆಸರೆ ಪಡೆದರು. ಇನ್ನು, ಛತ್ರಿ ಹಿಡಿದು ಜನರು ಓಡಾಡುತ್ತಿರುವ ದೃಶ್ಯಗಳು ಕಂಡುಬಂದವು. ಮಳೆಯಿಂದ ಸ್ಕೈ ವಾಕ್, ಬ್ರಿಡ್ಜ್​ಗಳ ಕೆಳಗೆ ಬೈಕ್ ಸವಾರರು ಆಸರೆ ಪಡೆದುಕೊಂಡರು

error: No Copying!