images-2.jpeg
Spread the love

ದಿನಾಂಕ:19-10-2025(ಹಾಯ್ ಉಡುಪಿ ನ್ಯೂಸ್)

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಅಳವಡಿಸಿದ್ದ ಬ್ಯಾನರ್ ಗಳು ಮತ್ತು ಭಗವಾಧ್ವಜಗಳನ್ನು ತೆಗೆದುಹಾಕಲಾಗಿದೆ. ಈ ಸಂಬಂಧ ರಾಜ್ಯ ಬಿಜೆಪಿ ಶನಿವಾರ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕರು, ಸಂಘಟನೆ ಕಾರ್ಯಕ್ರಮಕ್ಕೆ ಅನುಮತಿ ಪಡೆದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಅನುಮತಿ ಕಡ್ಡಾಯ ಎಂಬ ನಿಯಮ ಜಾರಿಗೆ ತರಲು ನಿರ್ಧರಿಸಿದ ಸಮಯದಲ್ಲಿ ಆರ್‌ಎಸ್‌ಎಸ್ ಭಾನುವಾರ ಚಿತ್ತಾಪುರದಲ್ಲಿ ‘ಪಥ ಸಂಚಲನ’ ಕಾರ್ಯಕ್ರಮ ಆಯೋಜಿಸಿದ್ದು, ಇದು ತನ್ನ ಶಕ್ತಿ ಪ್ರದರ್ಶನವೆಂದು ಪರಿಗಣಿಸಲಾದ ರೂಟ್ ಮಾರ್ಚ್ ಆಗಿದೆ. ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಆರ್. ಅಶೋಕ್, “ಚಿತ್ತಾಪುರ ಭಾರತದಲ್ಲಿದೆಯೇ ಅಥವಾ ಖರ್ಗೆ ಕುಟುಂಬದ ರಿಪಬ್ಲಿಕ್ ಆಗಿದೆಯೇ? ಎಂದು ಪ್ರಶ್ನಿಸಿದ್ದಾರೆ

error: No Copying!