IMG-20241220-WA00051.jpg
Spread the love

ಉಡುಪಿ: ದಿನಾಂಕ :29-10-2025(ಹಾಯ್ ಉಡುಪಿ ನ್ಯೂಸ್) ನಗರಸಭಾ ವ್ಯಾಪ್ತಿಯ ಬನ್ನಂಜೆ ಹಾಗೂ ಶಿರಿಬೀಡು ವಾರ್ಡಿನ ಒಳಚರಂಡಿಯ ದುರ್ವಾಸನೆಗೆ ಮುಕ್ತಿ ಯಾವಾಗ ಸಿಗುತ್ತದೆ ಎಂದು ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಗರಸಭಾ ಸದಸ್ಯರಾದ ಸುರೇಶ್ ಶೆಟ್ಟಿ ಬನ್ನಂಜೆ ಪ್ರಶ್ನೆ ಮಾಡಿದ್ದಾರೆ .

ಉಡುಪಿ ನಗರಸಭೆಯಲ್ಲಿ ನಿನ್ನೆ ನಡೆದಂತಹ ಸಾಮಾನ್ಯ ಸಭೆಯಲ್ಲಿ ನಗರಸಭಾ ಸದಸ್ಯರಾದ ಶ್ರೀ ಸುರೇಶ್ ಶೆಟ್ಟಿ ಬನ್ನಂಜೆ ಅವರು ಮಾತನಾಡಿ ನಿರಂತರವಾಗಿ ಬನ್ನಂಜೆ ಹಾಗೂ ಶಿರಿಬೀಡು ವಾರ್ಡಿನಲ್ಲಿ ರಾಜ ಕಾಲುವೆಯಲ್ಲಿ ನಿರಂತರವಾಗಿ ಒಳ ಚರಂಡಿಯ ನೀರು ಹರಿಯುತ್ತಿದ್ದು ಇದಕ್ಕೆ ಪರಿಹಾರವೇ ಇಲ್ಲದಂತಾಗಿದೆ ಸ್ಥಳೀಯ ತೋಡಿನ ಬದಿಯ ಜನರು ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದಾರೆ. ಕೂಡಲೇ ಇದನ್ನು ಸರಿಪಡಿಸಿ. ಜನರ ಸಮಸ್ಯೆಯನ್ನು ಪರಿಹರಿಸಿ .ಎಂದು ಸಭೆಯಲ್ಲಿ ಆಗ್ರಹಿಸಿದರು. ಅದೇ ರೀತಿ ಪರ್ಕಳದ ನೂತನ ಮಾರುಕಟ್ಟೆಗೆ ಗುದ್ದಲಿ ಪೂಜೆ ನಡೆದು ಮೂರು ತಿಂಗಳಾದರೂ ಇನ್ನೂ ಕಾಮಗಾರಿ ಪ್ರಾರಂಭವಾಗಿಲ್ಲ ಹಳೆಯ ಮಾರುಕಟ್ಟೆಯನ್ನು ಕೆಡವಲಾಗಿದೆ ಅದನ್ನು ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ,ಇಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ ಜನರು ವಾಹನಗಳನ್ನು ರಸ್ತೆಯಲ್ಲಿ ಇಟ್ಟು ಹೋಗಬೇಕಾದ ಪರಿಸ್ಥಿತಿ ಇದೆ ಇದರಿಂದ ಸ್ಥಳೀಯ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಸಭೆಯಲ್ಲಿ ಹೇಳಿದರು ಕೂಡಲೇ ಕಟ್ಟಡದ ಕಾಮಗಾರಿ ಪ್ರಾರಂಭಿಸಬೇಕೆಂದು ಒತ್ತಾಯಿಸಿದರು.

error: No Copying!