kannadaprabha_2025-12-20_qty3yg2k_burudegang.jpg
Spread the love

ದಿನಾಂಕ:21-12-2025(ಹಾಯ್ ಉಡುಪಿ ನ್ಯೂಸ್)

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೀಡಾಗಿ ಜೈಲಿನಲ್ಲಿದ್ದು ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ  ಚೆನ್ನಯ್ಯ, ತನಗೆ ಮತ್ತು ತನ್ನ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬುರುಡೆ ಟೀಮ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. 2012ರ ಅಕ್ಟೋಬರ್ 9ರಂದು ಧರ್ಮಸ್ಥಳದ ಬಳಿ ಸೌಜನ್ಯ ಮೇಲಿನ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಕಾರ್ಯಕರ್ತರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣನವರ್, ಟಿ ಜಯಂತ್, ವಿಠಲ ಗೌಡ ಮತ್ತು ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಿ ಚೆನ್ನಯ್ಯ ದೂರು ನೀಡಿದ್ದಾರೆ.

ಧರ್ಮಸ್ಥಳದಲ್ಲಿ ಅತ್ಯಾಚಾರ, ಕೊಲೆ ಮತ್ತು ನೂರಾರು ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನು ನೀಡಿದ ಹೇಳಿಕೆಗಳನ್ನು ಹಿಂತೆಗೆದುಕೊಂಡಿರುವುದರಿಂದ ಬುರುಡೆ ಟೀಮ್ ತನಗೆ ಮತ್ತು ತನ್ನ ಹೆಂಡತಿಗೆ ಹಾನಿ ಮಾಡಬಹುದು ಎಂದು ಆರೋಪಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ದೂರು ನೀಡುವಂತೆ ಚೆನ್ನಯ್ಯ ಮೇಲೆ ಒತ್ತಡ ಹೇರಿದ ಆರೋಪ ಬುರುಡೆ ಟೀಮ್ ಮೇಲಿದೆ. ಡಿಸೆಂಬರ್ 18ರಂದು ಜಾಮೀನಿನ ಮೇಲೆ ಶಿವಮೊಗ್ಗ ಜಿಲ್ಲಾ ಜೈಲಿನಿಂದ ಬಿಡುಗಡೆಯಾದ ಚೆನ್ನಯ್ಯ, ಅದೇ ದಿನ ಸಂಜೆ ತನ್ನ ಪತ್ನಿ ಮತ್ತು ಸಹೋದರಿಯೊಂದಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿ ತಮಗೆ ಭದ್ರತೆ ನೀಡುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ದೂರಿನ ಕುರಿತು ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಉಪ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ ಹೇಳಿದ್ದಾರೆ.ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಬಹು ಅತ್ಯಾಚಾರ, ಕೊಲೆ ಮತ್ತು ಸಮಾಧಿಗಳ ಆರೋಪಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ), ಭಾರತೀಯ ನಾಗರಿಕ ಸುರಕ್ಷಾ ಸಂಹಿತ (ಬಿಎನ್‌ಎಸ್‌ಎಸ್) ಸೆಕ್ಷನ್ 215ರ ಅಡಿಯಲ್ಲಿ ಬೆಳ್ತಂಗಡಿಯ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ 3,900 ಪುಟಗಳ ವರದಿಯನ್ನು ಸಲ್ಲಿಸಿದೆ. ಚಿನ್ನಯ್ಯ ಸೇರಿದಂತೆ ಆರು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಬಹು ಅತ್ಯಾಚಾರ, ಕೊಲೆ ಮತ್ತು ಸಮಾಧಿಗಳ ಆರೋಪಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 215ರ ಅಡಿಯಲ್ಲಿ ಬೆಳ್ತಂಗಡಿಯ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ 3,900 ಪುಟಗಳ ವರದಿಯನ್ನು ಸಲ್ಲಿಸಿದೆ. ಚೆನ್ನಯ್ಯ ಸೇರಿದಂತೆ ಆರು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

error: No Copying!