ಕುಂದಾಪುರ: ದಿನಾಂಕ:30-12-2025 (ಹಾಯ್ ಉಡುಪಿ ನ್ಯೂಸ್) ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿ ಶಾಪ್ ಮಾಲೀಕರನ್ನು ಠಾಣೆಗೆ ಕರೆಯಿಸಿ ಸಭೆ ನಡೆಸಿ, ಇತ್ತೀಚಿನ ದಿನಗಳಲ್ಲಿ ಆಭರಣ ಅಂಗಡಿಗಳಲ್ಲಿ ರಾಬರಿ ಹಾಗೂ ಡಕಾಯಿತಿ ಪ್ರಕರಣಗಳು ನಡೆಯುತ್ತಿರುವ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಿಸಿ ಕ್ಯಾಮಾರಾ, ಸೈರನ್ ವ್ಯವಸ್ಥೆ ಹಾಗೂ ಭದ್ರತಾ ಸಿಬ್ಬಂದಿಗಳನ್ನು ನೇಮಿಸುವಂತೆ ಠಾಣಾಧಿಕಾರಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
