IMG-20260120-WA0080.jpg
Spread the love

ಉಡುಪಿ: ದಿನಾಂಕ:20-01-2026 (ಹಾಯ್ ಉಡುಪಿ ನ್ಯೂಸ್)

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣವು ಅನೈತಿಕ ಚಟುವಟಿಕೆಯ ತಾಣವಾಗಿ ಪರಿವರ್ತನೆಯಾಗುತ್ತಿದೆ. ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿಯನ್ನು ನೀಡಲಾಯಿತು.

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ರಾತ್ರಿಯ ಹೊತ್ತು ಕುಡುಕರು ಹಾಗೂ ತೃತೀಯ ಲಿಂಗಿಗಳ ಹಾವಳಿ ಹೆಚ್ಚಾಗಿರುತ್ತದೆ. ಇಲ್ಲಿ ಎಲ್ಲೆಂದರಲ್ಲಿ ಕಾಂಡೊಮ್‌ಗಳು ಬಿದ್ದುಕೊಂಡಿದ್ದು, ಮಕ್ಕಳಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಇಲ್ಲಿ ವಿದ್ಯುತ್ ವ್ಯವಸ್ಥೆ ಇಲ್ಲದಿರುವುದರಿಂದ ಸುತ್ತಲಿನ ಸ್ಥಳ ಕತ್ತಲಾಗಿರುವುದರಿಂದ ಎಲ್ಲ ರೀತಿಯ ಕೆಟ್ಟ ಕೆಲಸಗಳು ನಡೆಯುತ್ತಿವೆ. ವಿದ್ಯುತ್ ಲೈಟ್ ಹಾಕಿದರೂ ಕೂಡ ಅದನ್ನು ಒಡೆದು ಹಾಕಿ ರಾಜಾರೋಷವಾಗಿ ಅವ್ಯವಹಾರ ನಡೆಸುತ್ತಿದ್ದಾರೆ. ಈ ಜಾಗದಲ್ಲಿ ಹೊಡೆದಾಟ ಬಡಿದಾಟ ಮಾಮೂಲು ಸಂಗತಿಯಾಗಿದೆ. ಪೊಲೀಸರು ಬೆದರಿಸಿದರೂ ಅವರು ಮತ್ತೆ ಇಲ್ಲಿಯೇ ಬಂದು ಹಾವಳಿ ನಡೆಸುತ್ತಿದ್ದು ಸಾರ್ವಜನಿಕರೂ ಸಹ ರಾತ್ರಿಯ ಹೊತ್ತು ಇಲ್ಲಿ ಸಂಚರಿಸಲು ಭಯಪಡುವಂತಾಗಿದೆ.

ಈ ಬಗ್ಗೆ ತಕ್ಷಣ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ ಸೇರಿಗಾರ್ತಿ, ಉಪಾಧ್ಯಕ್ಷೆ ದೇವಕಿ ಬಾರ್ಕೂರು, ಜಯಪ್ರಕಾಶ್ ಶೆಟ್ಟಿ, ನಾಗರಾಜ್, ಗಣೇಶ ರಮೇಶ, ಸವಿತಾ, ಆಶಾ ಮೊದಲಾದವರು ಉಪಸ್ಥಿತರಿದ್ದರು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

error: No Copying!