ಬೆಂಗಳೂರು: ದಿನಾಂಕ:28-03-2026(ಹಾಯ್ ಉಡುಪಿ ನ್ಯೂಸ್) ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಶನಿವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಗಳಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 201 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು.
ಹೈದರಾಬಾದ್ ಪರ ಇಶಾನ್ ಕಿಶನ್ ಸ್ಫೋಟಕ 80 ರನ್ನುಗಳ ಇನ್ನಿಂಗ್ಸ್ ಆಡಿದರೆ, ಆರ್ಸಿಬಿ ಪರ ಡಫಿ ಪ್ರಮುಖ 3 ವಿಕೆಟ್ ಪಡೆದರು.
ಗೆಲುವಿಗೆ 202 ರನ್ ಗಳ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರು ಪವರ್ಪ್ಲೇನಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ನಾಲ್ಕು ಓವರ್ಗಳಲ್ಲಿ ಇಬ್ಬರು ಸೇರಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು.
ವಿರಾಟ್ ಕೊಹ್ಲಿಯ ಭರ್ಜರಿ ಅರ್ಧ ಶತಕ(69)ದ ನೆರವಿನಿಂದ ಕೇವಲ 15.4 ಓವರ್ ಗಳಲ್ಲಿ 203ರನ್ ಗಳಿಸುವ ಮೂಲಕ ಆರ್ ಸಿಬಿ ಆರು ವಿಕೆಟ್ ಗಳ ಗೆಲುವು ಸಾಧಿಸಿತು.
ಕಳೆದ ವರ್ಷ ಆರ್ಸಿಬಿ ತಂಡದ ವಿಜಯೋತ್ಸವದ ಮೆರವಣಿಗೆಯಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 11 ಜನರ ಸ್ಮರಣಾರ್ಥ ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಉದ್ಘಾಟನಾ ಪಂದ್ಯಕ್ಕೂ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ನಿಮಿಷ ಮೌನ ಆಚರಿಸಲಾಯಿತು.

