ಕಾಪು : ದಿನಾಂಕ:19-06-2026(ಹಾಯ್ ಉಡುಪಿ ನ್ಯೂಸ್) ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಉಡುಪಿ ಯಿಂದ ಮಂಗಳೂರಿಗೆ ಸಾಗುತ್ತಿದ್ದ ವೇಗದೂತ ಬಸ್ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ ಘಟನೆ ಪಾಂಗಾಳ ರಾ.ಹೆ 66 ರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಮ್ರತ ಮಹಿಳೆ ನಿವ್ರತ್ತ ಬ್ಯಾಂಕಿನ ಉದ್ಯೋಗಿ ಎಂದು ತಿಳಿದು ಬಂದಿದ್ದು, ಅವರು ಪೂರ್ವ ಕಡೆಯಿಂದ ಪಶ್ಚಿಮದ ಕಡೆಗೆ ದಾಟಲು ರಸ್ತೆ ಬದಿ ನಿಂತಿದ್ದರು ಎಂದು ತಿಳಿದು ಬಂದಿದೆ.
ಉಚ್ಚಿಲದ ಸಮಾಜ ಸೇವಕ ಜಲಾಲ್, ಹಮೀದ್ ಮತ್ತು ಸ್ಥಳೀಯರು ಅಂಬುಲೆನ್ಸ್ ಮೂಲಕ ಮೃತದೇಹವನ್ನು ಉಡುಪಿಯ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲು ಸಹಕರಿಸಿದ್ದಾರೆ.
ಕಾಪು ಪೋಲಿಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ಮುಂದುವರಿಸಿದ್ದಾರೆ.

