ಬೆಂಗಳೂರು : ದಿನಾಂಕ:22-06-2026(ಹಾಯ್ ಉಡುಪಿ ನ್ಯೂಸ್) ಜ್ಞಾನದ ದಾಸೋಹವನ್ನು ಲಕ್ಷಾಂತರ ಪುಸ್ತಕಗಳ ಸಂಗ್ರಹದ ಮೂಲಕ ನಾಡಿಗೆ ಉಣಬಡಿಸುತ್ತಿರುವ ಮಹಾನ್ ಚೇತನ, ಪದ್ಮಶ್ರೀ ಪುರಸ್ಕೃತರು ಹಾಗೂ ‘ಪುಸ್ತಕ ಮನೆ’ಯ ರೂವಾರಿಗಳಾದ ಶ್ರೀ ಅಂಕೇಗೌಡ ಎಂ. ಅವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಲೋಚಿಸಿದರು. ಪುಸ್ತಕ ಲೋಕದ ಈ ಅನನ್ಯ ಸಾಧಕರೊಂದಿಗಿನ ಭೇಟಿ ಅತ್ಯಂತ ಅರ್ಥಪೂರ್ಣವಾಗಿತ್ತು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಣ್ಣಿಸಿದ್ದಾರೆ.


