
ಉಡುಪಿ: ದಿನಾಂಕ 07/04/2023 (ಹಾಯ್ ಉಡುಪಿ ನ್ಯೂಸ್) ಮೂಡನಿಡಂಬೂರು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ವ್ಯಕ್ತಿಯನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕು, ಮೂಡನಿಡಂಬೂರು ಗ್ರಾಮದ ಆರ್.ಎಸ್.ಬಿ ವಿಂಡ್ಸೋರ್ ಅಪಾರ್ಟ್ಮೆಂಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ಭಕ್ತ ಬಹದ್ದೂರ್ ಶರ್ಕಿ (40) ಎಂಬಾತನನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಕೋಕಿಲಾ ಹೆಚ್.ಜೆ ಯವರು ಬಂಧಿಸಿ ವಶಕ್ಕೆ ಪಡೆದು ಮೆಡಿಕಲ್ ತಪಾಸಣೆಗೊಳಪಡಿಸಿದ್ದು, ದಿನಾಂಕ 06/04/2023 ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ಬಂದಿರುವ ತಜ್ಞರ ವರದಿಯಲ್ಲಿ ಆರೋಪಿ ಭಕ್ತ ಬಹದ್ದೂರ್ ಶರ್ಕಿ ಗಾಂಜಾ ಸೇವನೆ ಮಾಡಿರುವುದು ಖಚಿತಪಟ್ಟಿರುತ್ತದೆ. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಆತನ ಮೇಲೆ ಕಲಂ: 27 (b) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.