
- ಮಲ್ಪೆ: ದಿನಾಂಕ 12/6/2024 (ಹಾಯ್ ಉಡುಪಿ ನ್ಯೂಸ್) ತೆಂಕನಿಡಿಯೂರಿನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಯುವಕನನ್ನು ಮಲ್ಪೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಪ್ರವೀಣ್ ಕುಮಾರ ಆರ್ ರವರು ಬಂಧಿಸಿದ್ದಾರೆ.
- ಮಲ್ಪೆ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಪ್ರವೀಣ್ ಕುಮಾರ ಆರ್ ಅವರು ದಿನಾಂಕ :06-06-2024 ರಂದು ರೌಂಡ್ಸ್ ಕರ್ತವ್ಯದಲ್ಲಿ ಇರುವಾಗ ಮಧ್ಯಾಹ್ನ ತೆಂಕನಿಡಿಯೂರು ಸಭಾಭವನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಅಮಲುಭರಿತನಾಗಿ ತೂರಾಡುತ್ತಿದ್ದ ನು ಎನ್ನಲಾಗಿದೆ.
- ಪೊಲೀಸರು ಅವನ ಬಳಿ ಹೋಗಿ ಅವನ ಹೆಸರು ಕೇಳಿದಾಗ ಅವನು ತೊದಲುತ್ತಾ ತನ್ನ ಹೆಸರು ಯೋಗೀಶ(22) ಎಂದು ತಿಳಿಸಿದ್ದು. ಪೊಲೀಸರು ಅವನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವನು ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದ ಮೇರೆಗೆ ಅವನನ್ನು ಬಂಧಿಸಿ ಸ್ಥಳದಲ್ಲಿಯೇ ವಶಕ್ಕೆ ಪಡೆದುಕೊಂಡು ವೈದ್ಯಕೀಯ ತಪಾಸಣೆ ಬಗ್ಗೆ ಪ್ರೊಫೆಸರ್ ಅಂಡ್ ಹೆಡ್ ಕೆಎಂಸಿ ಪೊರೆನ್ಸಿಕ್ ವಿಭಾಗದ ಮುಂದೆ ಹಾಜರು ಪಡಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ಆರೋಪಿ ಯೋಗೀಶ ಗಾಂಜಾ ಸೇವಿಸಿರುವ ಬಗ್ಗೆ ದೃಢ ಪತ್ರ ನೀಡಿರುತ್ತಾರೆ ಎನ್ನಲಾಗಿದೆ.
- ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ:27(B) NDPS ACT ರಂತೆ ಪ್ರಕರಣ ದಾಖಲಾಗಿದೆ.